ಟೀಸರ್ ನಲ್ಲೇ ಮೋಡಿ ಮಾಡಿದ “ಫಸ್ಟ್ ನೈಟ್ ವಿತ್ ದೆವ್ವ “. ಇದು ಪ್ರಥಮ್ ಅಭಿನಯದ ಚಿತ್ರ .

ಟೀಸರ್ ನಲ್ಲೇ ಮೋಡಿ ಮಾಡಿದ “ಫಸ್ಟ್ ನೈಟ್ ವಿತ್ ದೆವ್ವ “. ಇದು ಪ್ರಥಮ್ ಅಭಿನಯದ ಚಿತ್ರ .

“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ನವೀನ್ ಬೀರಪ್ಪ ನಿರ್ಮಾಣದ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ “ಬಿಗ್ ಬಾಸ್” ಸ್ಪರ್ಧಿಗಳಾದ “ತುಕಾಲಿ” ಸಂತೋಷ್ ಹಾಗೂ ನಮೃತ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಾನು ನಿರ್ದೇಶಕರ ನಟ ಎಂದು ಮಾತನಾಡಿದ ಪ್ರಥಮ್, ಪಿ.ವಿ.ಆರ್ ಸ್ವಾಮಿ‌ ಅವರು ಬಹುಬೇಗನೇ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ಕಳೆದ ನವೆಂಬರ್…

ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ .

ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ .

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ…

ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಚಿತ್ರೀಕರಣ ಪೂರ್ಣ .

ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಚಿತ್ರೀಕರಣ ಪೂರ್ಣ .

ಅಶ್ವಿನಿ ಆರ್ಟ್ಸ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ, ಕನ್ನಡದ ನ್ಯಾಚುರಲ್ ಸ್ಟಾರ್ ಎಂದೇ ಖ್ಯಾತಿಯಾಗಿರುವ ರಿಷಿ ನಾಯಕರಾಗಿ ಅಭಿನಯಿಸಿರುವ “ರುದ್ರ ಗರುಡ ಪುರಾಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಕ್ಲೈಮ್ಯಾಕ್ಸ್ ಫೈಟ್ ಅನ್ನು ಹೆಚ್ ಎಂ ಟಿ ಫ್ಯಾಕ್ಟರಿಯಲ್ಲಿ ಆರು ದಿನಗಳ ಕಾಲ ಚಿತ್ರಿಸಿಕೊಳ್ಳುವುದರೊಂದಿಗೆ ಈ ಚಿತ್ರದ ಚಿತ್ರೀಕರಣವನ್ನು ಇತ್ತೀಚಿಗೆ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಚಿತ್ರಕ್ಕೆ ಒಟ್ಟು 70 ದಿನಗಳ ಚಿತ್ರೀಕರಣ ನಡೆದಿದೆ. “ಕವಲು ದಾರಿ” ಚಿತ್ರದಲ್ಲಿ ಟ್ರಾಫಿಕ್ ಪೊಲೀಸ್ ಕೆಲಸದಿಂದ ಕ್ರೈಂ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಲು…

ಅಬುದಾಬಿಯಲ್ಲಿ “ಕರಟಕ ದಮನಕ” ಚಿತ್ರದ “ಡೀಗ ಡಿಗರಿ” ಹಾಡು ಬಿಡುಗಡೆ. .

ಅಬುದಾಬಿಯಲ್ಲಿ “ಕರಟಕ ದಮನಕ” ಚಿತ್ರದ “ಡೀಗ ಡಿಗರಿ” ಹಾಡು ಬಿಡುಗಡೆ. .

ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ“ಕರಟಕ ದಮನಕ” ಚಿತ್ರದ ಎರಡನೇ ಗೀತೆ “ಡೀಗ ಡಿಗರಿ” ಅಬುದಾಬಿಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಅಬುದಾಬಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಶಿವರಾಜಕುಮಾರ್, ಪ್ರಭುದೇವ, ಯೋಗರಾಜ್ ಭಟ್, ರಾಕ್ ಲೈನ್ ವೆಂಕಟೇಶ್…

ಬಹು ನಿರೀಕ್ಷಿತ `ಗೌರಿ’ ಚಿತ್ರದ ಚಿತ್ರೀಕರಣ.

ಬಹು ನಿರೀಕ್ಷಿತ `ಗೌರಿ’ ಚಿತ್ರದ ಚಿತ್ರೀಕರಣ.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಬಹು ನಿರೀಕ್ಷಿತ ಗೌರಿ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ; ಲಂಕೇಶ್ ಕುಟುಂಬದ ಮೂರನೇ ತಲೆಮಾರು ಸಮರ್ಜಿತ್ ಲಂಕೇಶ್ ನಾಯಕ ನಟನಾಗಿದ್ದು; ಸಾನ್ಯಾ ಅಯ್ಯರ್ ನಾಯಕಿಯಾಗಿದ್ದಾರೆ. ಬಹುದೊಡ್ಡ ತಾರಾಗಣವಿರುವಗೌರಿ’ ಚಿತ್ರದ ಅಪರೂಪದ; ವಿಭಿನ್ನ; ವಿಶಿಷ್ಠ ಶೈಲಿಯ ಫೋಟೋ ಶೂಟ್ ಬುಕ್ ಮೈ ಕ್ಯಾಪ್ಚರ್ ನಲ್ಲಿ ಯಶಸ್ವಿಯಾಗಿ ನಡೆದಿದೆ. ಖ್ಯಾತ ಛಾಯಾಗ್ರಾಹಕ ಕೆನಡಾದ ರೋಹಿತ್ ಅವರ ಕ್ಯಾಮೆರಾ ಕೈಚಳಕ, ದೀಪಿಕಾ ಪಡುಕೋಟೆ ಸೇರಿದಂತೆ ಅನೇಕ ಖ್ಯಾತ ಸೆಲಬ್ರೆಟಿಗಳ…

ನೋಡುಗರಿಗೆ ಮನೋರಂಜನೆಯ ರಸದೌತಣ ಸಿಗುವುದು ಖಂಡಿತ .

ನೋಡುಗರಿಗೆ ಮನೋರಂಜನೆಯ ರಸದೌತಣ ಸಿಗುವುದು ಖಂಡಿತ .

ಕುಟುಂಬ ಸಮೇತ ನೋಡಬಹುದಾದ ಉತ್ತಮ ಚಿತ್ರ “ಜಸ್ಟ್ ಪಾಸ್” ಚಿತ್ರ: ಜಸ್ಟ್ ಪಾಸ್‍ ನಿರ್ದೇಶನ: ಕೆ.ಎಂ. ರಘು ನಿರ್ಮಾಣ: ಕೆ.ವಿ. ಶಶಿಧರ್ ತಾರಾಗಣ: ಶ್ರೀ, ಪ್ರಣತಿ, ರಂಗಾಯಣ ರಘು, ಸಾಧು ಕೋಕಿಲ, ಸುಚೇಂದ್ರ ಪ್ರಸಾದ್‍, ಹನುಮಂತೇಗೌಡ, ಪ್ರಕಾಶ್‍ ತುಮ್ಮಿನಾಡು ಮುಂತಾದವರು ಅದು “ಜಸ್ಟ್ ಪಾಸ್” ಆದವರಿಗಾಗಿಯೇ ಇರುವ ಕಾಲೇಜು . ಕಾಲೇಜು ಸ್ಟೋರಿ ಅಂದ ತಕ್ಷಣ ಬರೀ ವಿದ್ಯಾರ್ಥಿಗಳ ತರಲೆ, ತುಂಟಾಟ‌ ಮಾತ್ರ ಈ ಚಿತ್ರದಲ್ಲಿಲ್ಲ. ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ಕೊಡುವ ಪ್ರಯತ್ನವನ್ನು ನಿರ್ದೇಶಕ ಕೆ.ಎಂ.ರಘು…

ಜೈಪುರ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸುಧೀರ್ ಅತ್ತಾವರ್ ರಮ್ರತ್ಯೋರ್ಮ ಕ್ಕೆ ಇಂಡಿಯನ್ ಪನೋರಮ “ಅತ್ಯುತ್ತಮ ಚಿತ್ರ” ಪ್ರಶಸ್ತಿ.

ಜೈಪುರ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸುಧೀರ್ ಅತ್ತಾವರ್ ರಮ್ರತ್ಯೋರ್ಮ ಕ್ಕೆ ಇಂಡಿಯನ್ ಪನೋರಮ “ಅತ್ಯುತ್ತಮ ಚಿತ್ರ” ಪ್ರಶಸ್ತಿ.

ಜೈಪುರದಲ್ಲಿ ಫೆ 9 ರಿಂದ13ರ ವರೆಗೆ ನಡೆಯುವ ಜೈಪುರ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸುಧೀರ್ ಅತ್ತಾವರ ನಿರ್ದೇಶನದ ಮ್ರತ್ಯೋರ್ಮ ಚಿತ್ರ ಇಂಡಿಯನ್ ಪನೋರಮಕ್ಕೆ ಆಯ್ಕೆ ಗೊಂಡು, ಅತ್ಯುತ್ತಮ ಚಿತ್ರ ಜ್ಯೂರಿ ಪ್ರಶಸ್ತಿಗೆ ಭಾಜನವಾಗಿದೆ.ಸುಮಾರು 67 ದೇಶಗಳಿಂದ 329 ಚಿತ್ರಗಳು ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದು, 101 ಚಲನಚಿತ್ರಗಳು ಸ್ಪರ್ಧಾ ಕಣದಲ್ಲಿತ್ತು.ತ್ರಿವಿಕ್ರಮ ಸಪಲ್ಯ ರವರು ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಿಸಿರುವ ಈ ಚಿತ್ರವು ಇತ್ತೀಚೆಗೆ ಮೂನ್ ವೈಟ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಸೇರಿ 4 ಪ್ರಶಸ್ತಿಗಳನ್ನು ಬಾಚಿಕೊಂಡು…

ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಉಪಾಧ್ಯಕ್ಷ”ನ ಗೆಲುವು . ಯಶಸ್ಸಿನ ಖುಷಿಯಲ್ಲಿ ಚಿಕ್ಕಣ್ಣ ಹಾಗೂ ಚಿತ್ರತಂಡ .ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಉಪಾಧ್ಯಕ್ಷ”ನ ಗೆಲುವು .

ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಉಪಾಧ್ಯಕ್ಷ”ನ ಗೆಲುವು . ಯಶಸ್ಸಿನ ಖುಷಿಯಲ್ಲಿ ಚಿಕ್ಕಣ್ಣ ಹಾಗೂ ಚಿತ್ರತಂಡ .ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಉಪಾಧ್ಯಕ್ಷ”ನ ಗೆಲುವು .

ಡಿ.ಎನ್.ಪಿಕ್ಚರ್ಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶಿಸಿರುವ ಹಾಗೂ ನಟ ಚಿಕ್ಕಣ್ಣ ಮೊದಲ ಬಾರಿಗೆ ನಾಯಕತಾಗಿ ನಟಿಸಿರುವ ” ಉಪಾಧ್ಯಕ್ಷ ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಯಶಸ್ಸಿಗೆ ಕಾರಣ ರಾಜ್ಯಾದ್ಯಂತ ಪ್ರೇಕ್ಷಕರು ತೋರಿಸುತ್ತಿರುವ ಒಲವು. ಆ ಒಲವಿಗೆ ಧನ್ಯವಾದ ಹೇಳಲು ಚಿತ್ರತಂಡ ಸಕ್ಸಸ್ ಮೀಟ್ ಆಯೋಜಿಸಿತ್ತು. ಈ ಚಿತ್ರ ಆರಂಭವಾಗಿದ್ದು ಚಿಕ್ಕಣ್ಣ ಅವರ ಮನೆಯಿಂದ. ಅಲ್ಲೇ ನಿರ್ಮಾಪಕ ಉಮಾಪತಿ ಅವರು ಕಥೆ ಕೇಳಿದ್ದು. ಸ್ಕ್ರಿಪ್ಟ್ ಟೈಮ್ ನಲ್ಲಿ ಸಾಕಷ್ಟು ಜನ…

ಸಾಮಾಜಿಕ ಕಾರ್ಯಕ್ರಮಗಳ ಜೊತೆಗೆ ಆರ್ ಚಂದ್ರು ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳ ನಿರ್ಧಾರ .

ಸಾಮಾಜಿಕ ಕಾರ್ಯಕ್ರಮಗಳ ಜೊತೆಗೆ ಆರ್ ಚಂದ್ರು ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳ ನಿರ್ಧಾರ .

ಕೇಶಾವರ ಎಂಬ ಹಳ್ಳಿಯಿಂದ ಬಂದ ರೈತನ ಮಗ ಆರ್ ಚಂದ್ರು ಅವರು ಮೊದಲ ಚಿತ್ರ “ತಾಜ್ ಮಹಲ್” ನಿಂದ ರಾಜ್ಯಾದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದರು. “ಕಬ್ಜ” ಎಂಬ ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಈಗ ದೇಶದೆಲ್ಲೆಡೆ ಮನೆ ಮಾತಾಗಿದ್ದಾರೆ. ತಮ್ಮ ಸರಳತೆ ಹಾಗೂ ಸಜ್ಜನಿಕೆಗೆ ಹೆಸರಾದ ಆರ್ ಚಂದ್ರು ಅವರು ಸದಾ ಜನರೊಂದಿಗೆ ಬೆರೆಯುವವರು. ರಾಜ್ಯಾದ್ಯಂತ ಇರುವ ಆರ್ ಚಂದ್ರು ಅಭಿಮಾನಿಗಳು, “ಮೈಲಾರಿ” ಆರ್ ಚಂದ್ರು ಅಭಿಮಾನಿಗಳು, ಜಿಲ್ಲಾಧ್ಯಕ್ಷರು, ರಾಜ್ಯಾಧ್ಯಕ್ಷರು ಸೇರಿ ಲ್ಲೆಡೆ ಆರ್ ಚಂದ್ರು ಅವರನ್ನು…

ಅದ್ದೂರಿಯಾಗಿ ನೆರವೇರಿತು “ರವಿಕೆ ಪ್ರಸಂಗ” ಚಿತ್ರದ ಪ್ರೀ ರಿಲೀಸ್ ಇವೆಂಟ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 16 ರಂದು ತೆರೆಗೆ.

ಅದ್ದೂರಿಯಾಗಿ ನೆರವೇರಿತು “ರವಿಕೆ ಪ್ರಸಂಗ” ಚಿತ್ರದ ಪ್ರೀ ರಿಲೀಸ್ ಇವೆಂಟ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 16 ರಂದು ತೆರೆಗೆ.

ವಿಭಿನ್ನ ಕಥಾಹಂದರ ಹೊಂದಿರುವ “ರವಿಕೆ ಪ್ರಸಂಗ” ಚಿತ್ರ ಫೆಬ್ರವರಿ 16 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು, ಇತ್ತೀಚೆಗೆ ಚಿತ್ರದ ಪ್ರೀ ರಿಲೀಸ್ ಇವೆಂಟನ್ನು ಕನಕಪುರ ರಸ್ತೆಯ ಫೋರಮ್ ಮಾಲ್ ನಲ್ಲಿ ಆಯೋಜಿಸಿತ್ತು. ಸಾವಿರಾರು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಲ್ಲಿಗೆ ಬಂದಿದ್ದ ಜನರೆಲ್ಲರೂ ರವಿಕೆ ಪ್ರಸಂಗ ಚಿತ್ರದ ಪೋಸ್ಟರ್ ಹಿಡಿದು ಶುಭಕೋರಿದರು. ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು. ನಿರ್ದೇಶಕರಾದ ಸಂತೋಷ್ ಕೊಡೆಂಕೇರಿ ಅವರು, ಕಥೆಗಾರ್ತಿ ಮತ್ತು ಸಂಭಾಷಣಾಗಾರ್ತಿ ಪಾವನ ಸಂತೋಷ್, ಚಿತ್ರದ ನಾಯಕಿಯಾದ…