ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “.

ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “.

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು,‌ ಮೋಕ್ಷೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತಾ…

ವಿದ್ಯಾ ವಿಜಯ್ ಅಭಿನಯದ ‘ಬೇಬೋ’ ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಾಲನೆ. ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಸಾರುವ ಚಿತ್ರ.

ವಿದ್ಯಾ ವಿಜಯ್ ಅಭಿನಯದ ‘ಬೇಬೋ’ ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಾಲನೆ. ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಸಾರುವ ಚಿತ್ರ.

ಈ ಹಿಂದೆ ‘ಯುದ್ಧ ಮತ್ತು ಸ್ವಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ಒಂದು ಸಣ್ಣ ಗ್ಯಾಪ್‍ನ ನಂತರ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿದ್ಯಾ ಸದ್ಯ ‘ಬೇಬೋ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚಿಗೆ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್, ನಟ ಕೌಶಿಕ್, ಅನಂತು ಮುಂತಾದ ಗಣ್ಯರು ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು….

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್ . ಮಾಲತಿ ಶೇಖರ್ ನಿರ್ಮಾಣದ ಈ ಚಿತ್ರಕ್ಕೆ ಎಂ.ಜಯ್ಯರಾಮಃ ನಿರ್ದೇಶನ .

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್ . ಮಾಲತಿ ಶೇಖರ್ ನಿರ್ಮಾಣದ ಈ ಚಿತ್ರಕ್ಕೆ ಎಂ.ಜಯ್ಯರಾಮಃ ನಿರ್ದೇಶನ .

ಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರಾಮಃ ನಿರ್ದೇಶನದ ಹಾಗೂ “ದಿಲ್ ವಾಲ” ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಚೇಸರ್” ಚಿತ್ರದ ಟೀಸರ್ ಚೆನ್ನಾಗಿದೆ.‌ ಆಕ್ಷನ್…

RaghavendraChitravani Awards 2024  – Sudheendravenkatesh

RaghavendraChitravani Awards 2024 – Sudheendravenkatesh

ಈ ಬಾರಿಯ ಪ್ರಶಸ್ತಿಗಳ ವಿವರ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಶ್ರೀಮತಿ ಮೀನಾಕ್ಷಿ ಕೆ.ವಿ. ಜಯರಾಂ (ಹಿರಿಯ ಚಲನಚಿತ್ರ ನಿರ್ಮಾಪಕರು)ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಶ್ರೀ ಕೆ.ಜೆ. ಕುಮಾರ್ ( ಹಿರಿಯ ಪತ್ರಕರ್ತರು )**ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ – ಕುಮಾರಿ ಅನುರಾಧಾ ಭಟ್‍(ಗಾಯಕಿ)ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ (ಖ್ಯಾತ ಹಿನ್ನೆಲೆ ಗಾಯಕರಿಗೆ ನೀಡುವ ಪ್ರಶಸ್ತಿ) ಶ್ರೀ ಓಂಪ್ರಕಾಶ್‍ ರಾವ್‍(ಹಿರಿಯ ನಿರ್ದೇಶಕರು)ಯಜಮಾನ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ…

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ.‌ .ಹೊಸವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡಿ ನಾಯಕಿಯನ್ನು ಸ್ವಾಗತಿಸಿದ ಚಿತ್ರತಂಡ .

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ.‌ .ಹೊಸವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡಿ ನಾಯಕಿಯನ್ನು ಸ್ವಾಗತಿಸಿದ ಚಿತ್ರತಂಡ .

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಬಲರಾಮನ ದಿನಗಳು”. ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ.ಬಹು ನಿರೀಕ್ಷಿತ “ಬಲರಾಮನ ದಿನಗಳು” ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. “ರಾಜಕುಮಾರ”, “ಜೇಮ್ಸ್”, “ಆರೆಂಜ್”, “ಕರಟಕ ದಮನಕ” ದಂತಹ ಯಶಸ್ವಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿ ಪ್ರಿಯಾ ಆನಂದ್ ಜನಪ್ರಿಯರಾಗಿದ್ದಾರೆ. ಹೊಸವರ್ಷದ…

ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ.

ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ.

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 DAYS” ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ ಚಿತ್ರ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ಸಂಗೀತ ನಿರ್ದೇಶಕ ವಿ.ಮನೋಹರ್, ಇಂದು ಬಿಡುಗಡೆಯಾಗಿರುವ ಒಪೇರ(ಕಥನಾ ಗೀತೆ) ಶೈಲಿಯ ಹಾಡು ಕನ್ನಡದಲ್ಲಿ ಇದೇ ಮೊದಲು ಎನ್ನುವುದು…

“ಪಿನಾಕ”ಧರನಾದ ಗೋಲ್ಡನ್ ಸ್ಟಾರ್ ಗಣೇಶ್ ..ಟೈಟಲ್ ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ ನಿರ್ಮಾಣದ ಹಾಗೂ ಧನಂಜಯ ನಿರ್ದೇಶನದ ಈ ಸಿನಿಮಾ

“ಪಿನಾಕ”ಧರನಾದ ಗೋಲ್ಡನ್ ಸ್ಟಾರ್ ಗಣೇಶ್ ..ಟೈಟಲ್ ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ ನಿರ್ಮಾಣದ ಹಾಗೂ ಧನಂಜಯ ನಿರ್ದೇಶನದ ಈ ಸಿನಿಮಾ

ಕಳೆದವರ್ಷದ ಸೂಪರ್ ಹಿಟ್ ಚಿತ್ರಗಳಲ್ಲೊಂದಾದ ” ಕೃಷ್ಣಂ ಪ್ರಣಯ ಸಖಿ” ನಂತರ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಬಹು ನಿರೀಕ್ಷಿತ ಈ ಚಿತ್ರಕ್ಕೆ “ಪಿನಾಕ” ಎಂದು ಹೆಸರಿಡಲಾಗಿದೆ. “ಪಿನಾಕ” ಎಂದರೆ ತ್ರಿಶೂಲ ಎಂದು ಅರ್ಥ. ಈಗಾಗಲೇ ತೆಲುಗು, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ 48 ಚಿತ್ರಗಳನ್ನು ನಿರ್ಮಿಸಿರುವ ಟಿ.ಜಿ.ವಿಶ್ವಪ್ರಸಾದ್ ಸಾರಥ್ಯದ ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ‌ ಮಾಡುತ್ತಿರುವ 49 ನೇ ಚಿತ್ರವಿದು. ನೃತ್ಯ ನಿರ್ದೇಶಕನಾಗಿ ಜನಪ್ರಿಯರಾಗಿರುವ ಧನಂಜಯ ಮೊದಲ ಬಾರಿಗೆ…

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಹೊಸವರ್ಷದ ದಿನ ಅನಾವರಣವಾಯಿತು “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಫಸ್ಟ್ ಲುಕ್.‌ .ಫಸ್ಟ್ ಲುಕ್ ನಲ್ಲೇ ಮೋಡಿ ಮಾಡಿದೆ ಮಡೆನೂರ್ ಮನು ಅಭಿನಯದ ಈ ಚಿತ್ರ .

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಹೊಸವರ್ಷದ ದಿನ ಅನಾವರಣವಾಯಿತು “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಫಸ್ಟ್ ಲುಕ್.‌ .ಫಸ್ಟ್ ಲುಕ್ ನಲ್ಲೇ ಮೋಡಿ ಮಾಡಿದೆ ಮಡೆನೂರ್ ಮನು ಅಭಿನಯದ ಈ ಚಿತ್ರ .

ಕೆ ರಾಮ್ ನಾರಾಯಣ್ ನಿರ್ದೇಶನದ, ಯೋಗರಾಜ್ ಭಟ್ ಕಥೆ ಹೊಂದಿರುವ, ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಾಣದ, ಮಡೆನೂರು ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಫಸ್ಟ್ ಲುಕ್ ಹೊಸವರ್ಷದ ಮೊದಲ‌ ದಿನ ಬಿಡುಗಡೆಯಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರತ್ತಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ…

ಡಿಜಿಟಲ್‌ ಮನರಂಜನೆ ಕ್ಷೇತ್ರಕ್ಕೆ ಹೊಸದಾದ Glopixs ಒಟಿಟಿ.ಏಕಕಾಲಕ್ಕೆ ಮೂರು ರಾಜ್ಯಗಳಲ್ಲಿ ಗಣ್ಯರಿಂದ ಲೋಗೊ ಅನಾವರಣ .

ಡಿಜಿಟಲ್‌ ಮನರಂಜನೆ ಕ್ಷೇತ್ರಕ್ಕೆ ಹೊಸದಾದ Glopixs ಒಟಿಟಿ.ಏಕಕಾಲಕ್ಕೆ ಮೂರು ರಾಜ್ಯಗಳಲ್ಲಿ ಗಣ್ಯರಿಂದ ಲೋಗೊ ಅನಾವರಣ .

ಡಿಜಿಟಲ್‌ ಒಟಿಟಿ ವೇದಿಕೆಗೆ ಇದೀಗ ಹೊಸದೊಂದು ಒಟಿಟಿಯ ಆಗಮನವಾಗುತ್ತಿದೆ. ಅದುದೇ Global Pix Incನ ಗ್ಲೋಪಿಕ್ಸ್‌ (Glopixs). ಈ ಹೊಸ ಒಟಿಟಿ ವೇದಿಕೆ ಇದೀಗ ಅಧಿಕೃತವಾಗಿ ಅನಾವರಣಗೊಂಡಿದೆ. ಇತ್ತೀಚೆಗೆ “ಗ್ಲೋಪಿಕ್ಸ್‌”ನ ಲೋಗೋ ಅನಾವರಣವಾಗಿದೆ. ಕರ್ನಾಟಕ, ಕೇರಳ ಹಾಗೂ ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಲೋಗೊ ಬಿಡುಗಡೆಯಾಗಿದ್ದು ವಿಶೇಷ. ಬೆಂಗಳೂರಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ಹಿರಿಯ ಛಾಯಾಗ್ರಾಹಕ, ಸೆನ್ಸಾರ್ ಬೋರ್ಡ್ ಸದಸ್ಯರಾದ ಶ್ರೀವತ್ಸ ಶಾಂಡಿಲ್ಯ…

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ . ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ . .

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ . ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ . .

ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರವನ್ನು ಫೆಬ್ರವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಸದ್ಯದಲ್ಲೇ ಬರುವ ಸಂಕ್ರಾಂತಿ ಸಂದರ್ಭದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಚಿತ್ರದ ಗ್ಲಿಂಪ್ಸ್, ಹಾಡು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಖ್ಯಾತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈಗಾಗಲೇ…