ಲಹರಿ ವೇಲು ಅವರ ಪುತ್ರ ಸಾಯಿ ಅವರ ವಿವಾಹ ದಿಯಾ ಅವರೊಂದಿಗೆ ಇತ್ತೀಚೆಗೆ ಬೆಂಗಳೂರು ಪ್ಯಾಲೆಸ್ ನಲ್ಲಿ ಅದ್ದೂರಿಯಾಗಿ ನೆರವೇರಿತು.


ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ನವರಸ ನಾಯಕ ಜಗ್ಗೇಶ್, ನೀನಾಸಂ ಸತೀಶ್, ಅಕುಲ್ ಬಾಲಾಜಿ, ವಿನಯ್ ರಾಜಕುಮಾರ್, ರೀಷ್ಮಾ ನಾಣಯ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಡಾ||ಜಯಮಾಲಾ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಮಾಜಿ ಸಂಸದರಾದ ಡಿ.ಕೆ.ಸುರೇಶ್, ಶಾಸಕ ಮುನಿರತ್ನ ಸೇರಿದಂತೆ ಚಿತ್ರರಂಗ, ರಾಜಕೀಯ ಕ್ಷೇತ್ರ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ವಿವಾಹ ಮಹೋತ್ಸವಕ್ಕೆ ಆಗಮಿಸಿ ವಧುವರರಿಗೆ ಶುಭ ಕೋರಿದರು
