ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡನ್ನು ಹಾಡುವುದರ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಖ್ಯಾತ ಗಾಯಕಿ ದೀಪ್ತಿ ಸುರೇಶ್

ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡನ್ನು ಹಾಡುವುದರ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಖ್ಯಾತ ಗಾಯಕಿ ದೀಪ್ತಿ ಸುರೇಶ್

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ಕರೆದರೆ ಹಾಗೆಲಾ ಬರಲಾರೆ ನಾನು” ಎಂಬ ಹಾಡನ್ನು ತಮಿಳು ಹಾಗೂ ಹಿಂದಿ ಚಿತ್ರಗಳ ಪ್ರಸಿದ್ದ ಗೀತೆಗಳನ್ನು ಹಾಡಿ ಜನಪ್ರಿಯರಾಗಿರುವ ಗಾಯಕಿ ದೀಪ್ತಿ ಸುರೇಶ್ ಹಾಡಿದ್ದಾರೆ. ಈ ಹಾಡನ್ನು ಹಾಡುವ ಮೂಲಕ ದೀಪ್ತಿ ಸುರೇಶ್ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. “ಮಾಮನ್ನನ್”, “ಬೇಬಿ…

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ .!!

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ .!!

ಮಿಲಿಂದ್ – ರೆಚೆಲ್ ಡೇವಿಡ್ ಅಭಿನಯದ ಈ ಚಿತ್ರ ಫೆಬ್ರವರಿ 7 ರಂದು ಬಿಡುಗಡೆ .. ಆರಂಭದಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರ ಫೆಬ್ರವರಿ 7 ರಂದು ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಬಿಡುಗಡೆಗೂ ಪೂರ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಾಯಕ ಮಿಲಿಂದ್, ನಿರ್ಮಾಪಕ ಮಂಜುನಾಥ್ ದಾಸೇಗೌಡ…

ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ‌‌ ಆಯ್ಕೆ

ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ‌‌ ಆಯ್ಕೆ

ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮ್ಯಾಟ್ನಿ” ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ “ನೀ ನಂಗೆ ಅಲ್ಲವಾ” ಚಿತ್ರ ಮೂಡಿಬರುತ್ತಿದೆ. ರಾಹುಲ್ ಅರ್ಕಾಟ್ ಎಂಬ ಹೊಸ ನಟ ಈ ಚಿತ್ರದ ಮೂಲಕ ನಾಯಕಾಗಿ ಚಿತ್ರರಂಗ‌ ಪ್ರವೇಶಿಸುತ್ತಿದ್ದಾರೆ. ನಾಯಕಿಯ ಹೆಸರನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದ ಚಿತ್ರತಂಡ, ಈಗ ಚಿತ್ರದ ನಾಯಕಿಯ…

ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಗಾಂಗೇಯ” ಚಿತ್ರದ ಹಾಡುಗಳು .

ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಗಾಂಗೇಯ” ಚಿತ್ರದ ಹಾಡುಗಳು .

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ‘ಗಾಂಗೇಯ’ ಸಿನೆಮಾ ತಯಾರಾಗುತ್ತಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಸಿನೆಮಾದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ನರಸಿಂಹಲು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರ ದೊಡ್ಡಪ್ಪ ಚೆಲುವಮೂರ್ತಿ ಮುಂತಾದ ಗಣ್ಯರು ಕನ್ನಡ ಅವತರಣಿಕೆಯ ಹಾಡುಗಳನ್ನು ಬಿಡುಗಡೆ ಮಾಡಿ ಶುಭಕೋರಿದರು. ತೆಲುಗು ಸಿನೆಮಾ ರಂಗದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಸಿನೆಮಾಗಳಲ್ಲಿ…

ಲಾಫಿಂಗ್ ಬುದ್ಧ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರದ ಅಪ್ಡೇಟ್ ಕೊಟ್ಟ ಪ್ರಮೋದ್ ಶೆಟ್ಟಿ.

ಲಾಫಿಂಗ್ ಬುದ್ಧ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರದ ಅಪ್ಡೇಟ್ ಕೊಟ್ಟ ಪ್ರಮೋದ್ ಶೆಟ್ಟಿ.

ಅವರ ಹುಟ್ಟುಹಬ್ಬದ ಪ್ರಯುಕ್ತ ಕಾರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ ಚಿತ್ರತಂಡ ಹುಟ್ಟುಹಬ್ಬಕ್ಕೆ ಶುಭ ಕೋರುತ್ತಾ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ, TEASER COMMING SOON ಅಂತ ಕೂಡ ಅನೌನ್ಸ್ ಮಾಡಿದ್ದಾರೆ. *ವಡ್ಡಾರಾಧಕ , ಶಬರಿಯಂತಹ ಕಿರುಚಿತ್ರಗಳಿಂದ ತಮ್ಮೂರಿನ ಕಥೆಗಳು ಎಲ್ಲಾ ಊರುಗಳಲ್ಲೂ ತಲುಪಬೇಕೆಂಬ ಆಶಯವುಳ್ಳ ಅನೀಶ್ ಎಸ್ ಶರ್ಮಾ ಈ ಸಿನಿಮಾದ ಮುಂದಾಳತ್ವ ವಹಿಸಿದ್ದಾರೆ. ಚಿತ್ತರಂಜನ್ ಕಶ್ಯಪ್, ವಲ್ಲಭ ಸೂರಿ ಮತ್ತು ಸುನೀತ್ ಹಲಗೇರಿ ತಮ್ಮ ಸಂಸ್ಥೆ Gunnybag Studios ಮೂಲಕ ಹೊಸ ಹೊಸ ಪ್ರಯೋಗಗಳನ್ನು ತಮ್ಮ…

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡು . ಹೂಡಿ ಚಿನ್ನಿ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ ಮಂಜುಕವಿ ಬರೆದಿರವ ಈ ಗೀತೆ .

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡು . ಹೂಡಿ ಚಿನ್ನಿ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ ಮಂಜುಕವಿ ಬರೆದಿರವ ಈ ಗೀತೆ .

ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಹೆಚ್ ಎಂ ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ‌. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಶ್ರೀಮಹದೇವ ಸ್ವಾಮಿಜಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ಚೇತನ್ ಅಹಿಂಸ, ನಿರ್ದೇಶಕ ಋಷಿ, ಭಾರತೀಯ ಸೇವಾ…

ರೆಟ್ರೋ ಸ್ಟೈಲ್’ನಲ್ಲಿ ಮೂಡಿ ಬಂದ “ಹೇಳು ಗೆಳತಿ”. ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ರೆಟ್ರೋ ಸ್ಟೈಲ್’ನಲ್ಲಿ ಮೂಡಿ ಬಂದ “ಹೇಳು ಗೆಳತಿ”. ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದೆ ಚಿತ್ರತಂಡ. ಈ ಹಿಂದೆ ಹರಿಬಿಟ್ಟಿದ್ದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ‘ಹೇಳು ಗೆಳತಿ’ ಹಾಡಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂಬುದು ತಂಡದ ಅನಿಸಿಕೆ. ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ…

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ದಾಖಲೆ ಬರೆದ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ದ್ವಾಪರ ದಾಟುತ” ಹಾಡು .

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ದಾಖಲೆ ಬರೆದ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ದ್ವಾಪರ ದಾಟುತ” ಹಾಡು .

ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ ಹಾಗೂ…

ಈ ವಾರ ತೆರೆಗೆ ಅಭಿಜಿತ್ ಅಭಿನಯದ “ಅಡವಿಕಟ್ಟೆ” .

ಈ ವಾರ ತೆರೆಗೆ ಅಭಿಜಿತ್ ಅಭಿನಯದ “ಅಡವಿಕಟ್ಟೆ” .

ಉಮ ಎಸ್ ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ, ಹಿರಿಯನಟ ಆಭಿಜಿತ್ ಹಾಗೂ ನಾಗರಾಜು ಪ್ರಮುಖಪಾತ್ರದಲ್ಲಿ ನಟಿಸಿರುವ “ಅಡವಿಕಟ್ಟೆ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ‌ಹಾಗೂ ಹಾಡುಗಳು ಜನಪ್ರಿಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜತೆಗೆ ಹಾರಾರ್ ಜಾನಾರ್ ನ ಈ ಚಿತ್ರಕ್ಕೆ ಗೋಕಾಕ್ ನಗರದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಎಸ್ ಎನ್ ಈಶ್ವರ್ ಸಂಗೀತ ನಿರ್ದೇಶನ, ವೀರೇಶ್ ಛಾಯಾಗ್ರಹಣ, ಆದಿ ಆದರ್ಶ್ ಸಂಕಲನ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ಸಂಜೀವ್ ಅವರ…

ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ .

ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ .

ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘ, ಮೈಸೂರಿನಲ್ಲಿ ಚಿತ್ರನಗರಿ ಬಡವಾಣೆ ಮತ್ತು ಗಂಧದ ಗುಡಿ ಫಮಲ್ಯಾಂಡ್ ನಿರ್ಮಿಸುವ ಪ್ರಯತ್ನದಲ್ಲಿದ್ದು, ಆ ಮೂಲಕ ಚಲನಚಿತ್ರರಂಗದ ಎಲ್ಲಾ ವರ್ಗದವರಿಗೆ ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ ಹಾಕಿಕೊಂಡಿದೆ. ಈ ಕುರಿತು ಮೈಸೂರು, ಮಂಡ್ಯ, ಕೊಡಗು, ಹಾಸನ‌ ಹಾಗೂ ಚಾಮರಾಜನಗರ ಐದು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದಿಂದ ಮಾನ್ಯತೆ ಪಡೆದುಕೊಳ್ಳಲಾಗಿದೆ. ಮೈಸೂರು – ಬನ್ನೂರು ರಸ್ತೆಯಲ್ಲಿ ಈಗಾಗಲೇ 50 ಎಕರೆ ಜಾಗವನ್ನು ನೋಡಲಾಗಿದೆ. ಯಾವು‌ದೇ ಅಡೆತಡೆಗಳಿಲ್ಲದೆ…