ಚಿತ್ರಸಂತೆಯಲ್ಲಿ ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಫಸ್ಟ್ ಲುಕ್ .

ಚಿತ್ರಸಂತೆಯಲ್ಲಿ ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಫಸ್ಟ್ ಲುಕ್ .

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ “31 DAYS” ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಅನಾವರಣವಾಯಿತು. “31 DAYS” ಚಿತ್ರಕ್ಕೆ “ಹೈ ವೋಲ್ಟೇಜ್ ಲವ್ ಸ್ಟೋರಿ” ಎಂಬ ಅಡಿಬರಹವಿದೆ. ಇದೊಂದು ಪ್ರೇಮ ಕಥಾನಕವಾಗಿದ್ದು, ಚಿತ್ರಸಂತೆಗೆ ಆಗಮಿಸಿದ್ದ 46 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿರುವ ದಂಪತಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ವಿಶೇಷ. ಶೀರ್ಷಿಕೆಯನ್ನು ಯುವ ಪ್ರೇಮಿಗಳು ಬಿಡುಗಡೆ ಮಾಡಿದರು. ಅಲ್ಲಿ ನೆರದಿದ್ದ ಸಹಸ್ರಾರು ಕಲಾಸಕ್ತರು “31…

ಫೆಬ್ರವರಿಯಲ್ಲಿ ತೆರೆಗೆ ಬರಲಿದೆ “ಪುರುಷೋತ್ತಮನ‌ ಪ್ರಸಂಗ”. ಇದು ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದ ಮೊದಲ ಕನ್ನಡ ಚಿತ್ರ

ಫೆಬ್ರವರಿಯಲ್ಲಿ ತೆರೆಗೆ ಬರಲಿದೆ “ಪುರುಷೋತ್ತಮನ‌ ಪ್ರಸಂಗ”. ಇದು ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದ ಮೊದಲ ಕನ್ನಡ ಚಿತ್ರ

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಪುರುಷೋತ್ತಮನ‌ ಪ್ರಸಂಗ” ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ದೇವದಾಸ್ ಕಾಪಿಕಾಡ್, ಕನ್ನಡದಲ್ಲಿ ನನಗೆ ಮೊದಲ ಚಿತ್ರವನ್ನು ನಿರ್ದೇಶಿಸಲು ಅವಕಾಶ…

ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಬಿಡುಗಡೆ ಮಾಡಲಿದ್ದಾರೆ ಆದಿತ್ಯ ಅಭಿನಯದ “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್. ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ .

ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಬಿಡುಗಡೆ ಮಾಡಲಿದ್ದಾರೆ ಆದಿತ್ಯ ಅಭಿನಯದ “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್. ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ .

ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. “ಕಾಂಗರೂ” ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. “ಕಾಂಗರೂ” ಚಿತ್ರದ ಮೋಷನ್…

ದೇಶದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಹೊಸ್ತಿಲಲ್ಲೇ ಕನ್ನಡದಲ್ಲೊಂದು ಹನುಮಾನ್ ಚಾಲಿಸ.

ದೇಶದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಹೊಸ್ತಿಲಲ್ಲೇ ಕನ್ನಡದಲ್ಲೊಂದು ಹನುಮಾನ್ ಚಾಲಿಸ.

ಭಕ್ತಿ ಭಾವದ ಹೊನಲಿಗೆಹೃದಯಸ್ಪರ್ಶ ನೀಡುವ ಹೃತ್ಕಂಠ ಗಾಯಕ ನಮ್ಮ ಕನ್ನಡದ ಹೆಮ್ಮೆಯ ವಿಜಯ್ ಪ್ರಕಾಶ್ ಅವರ ಧ್ವನಿಯಲ್ಲಿ ಕನ್ನಡದಲ್ಲಿ ಮೊದಲನೇ ಹನುಮಾನ ಚಾಲಿಸಾ ಕೋಟ್ಯಾಂತರ ಜನ ಭಾರತೀಯರು ಕಾತುರದಿಂದ ಕಾಯುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠೆ ಸುಸಮಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಜಗತ್ತಿಗೆ ಭಕ್ತಿಯ ನಿಯಮ –ಏನೆಂದು ತೋರಿಸಿಕೊಟ್ಟ ರಾಮಭಕ್ತ ಹನುಮನ ಕುರಿತಾದ ಹನುಮಾನ್ ಚಾಲಿಸಾ ಬಿಡುಗಡೆಯಾಗಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಮೂಡಿಬಂದಿರುವ ಹನುಮಾನ್ ಚಾಲಿಸಾ ವನ್ನು ಭಕ್ತಿ ಭಾವದ ಹೊನಲಿಗೆ ಹೃದಯಸ್ಪರ್ಶ ನೀಡುವ ಹೃತ್ಕಂಠ…

” ಬೊಂಬಾಟ್ ಭೋಜನ” ಕ್ಕೆ ಸಾವಿರದ ಸಂಭ್ರಮ . ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ .

” ಬೊಂಬಾಟ್ ಭೋಜನ” ಕ್ಕೆ ಸಾವಿರದ ಸಂಭ್ರಮ . ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ .

ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್‍ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು ಸಂಭ್ರಮದ ಸಮಾರಂಭವೊಂದನ್ನು ಆಯೋಜಿಸಿದ್ದರು. ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ “ಬೊಂಬಾಟ್ ಭೋಜನ” ಹಾಕಿಸಿ ಕಾರ್ಯಕ್ರಮದ…

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ.

ಈ ಬಾರಿಯ ಪ್ರಶಸ್ತಿಗಳ ವಿವರ ಶ್ರೀ ದಿ. ರಾಮು (ರಾಮು ಎಂಟರ್ ಪ್ರೈಸಸ್), ಹಿರಿಯ ಚಲನಚಿತ್ರ ನಿರ್ಮಾಪಕರು( ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ) ಶ್ರೀ ಮುರಳಿಧರ ಖಜಾನೆ, ಹಿರಿಯ ಚಲನಚಿತ್ರ ಪತ್ರಕರ್ತರು( ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ) ಶ್ರೀ ಹೇಮಂತ್ ಕುಮಾರ್, ಖ್ಯಾತ ಹಿನ್ನಲೆ ಗಾಯಕರು( ಡಾ. ರಾಜ್‌ಕುಮಾರ್ ಪ್ರಶಸ್ತಿ- ಡಾ|| ರಾಜ್‌ಕುಮಾರ್ ಕುಟುಂಬದವರಿಂದ ) ಶ್ರೀ ನಾಗತಿಹಳ್ಳಿ ಚಂದ್ರಶೇಖರ್, ನಿರ್ದೇಶಕರು(‘ ಯಜಮಾನ’ ಚಿತ್ರದ ಖ್ಯಾತಿ ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ – ಶ್ರೀಮತಿ ಭಾರತಿ…

ಗಿರೀಶ್ ಕಾಸರವಳ್ಳಿ – ಜೋಗಿ ಅವರಿಂದ ಬಿಡುಗಡೆಯಾಯಿತು “ಕೋಳಿ ಎಸ್ರು” ಹಾಗೂ “ಹದಿನೇಳೆಂಟು” ಚಿತ್ರಗಳ ಟ್ರೇಲರ್ . ಪ್ರಶಸ್ತಿ ವಿಜೇತ ಈ ಎರಡು ಚಿತ್ರಗಳು ಜನವರಿ 26 ರಂದು ತೆರೆಗೆ

ಗಿರೀಶ್ ಕಾಸರವಳ್ಳಿ – ಜೋಗಿ ಅವರಿಂದ ಬಿಡುಗಡೆಯಾಯಿತು “ಕೋಳಿ ಎಸ್ರು” ಹಾಗೂ “ಹದಿನೇಳೆಂಟು” ಚಿತ್ರಗಳ ಟ್ರೇಲರ್ . ಪ್ರಶಸ್ತಿ ವಿಜೇತ ಈ ಎರಡು ಚಿತ್ರಗಳು ಜನವರಿ 26 ರಂದು ತೆರೆಗೆ

ಚಂಪಾ.ಪಿ. ಶೆಟ್ಟಿ ನಿರ್ದೇಶನದ “ಕೋಳಿ ಎಸ್ರು” ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ “ಹದಿನೇಳೆಂಟು” ಚಿತ್ರಗಳ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು “ಕೋಳಿ ಎಸ್ರು” ಚಿತ್ರದ ಟ್ರೇಲರ್ ಅನ್ನು ಹಾಗೂ ಜನಪ್ರಿಯ ಲೇಖಕ & ಪತ್ರಕರ್ತ ಜೋಗಿ ಅವರು “ಹದಿನೇಳೆಂಟು” ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಚಂಪಾ ಶೆಟ್ಟಿ ಅವರು ಹಿಂದೆ “ಅಮ್ಮಚ್ಚಿಯೆಂಬ ನೆನಪು” ಚಿತ್ರವನ್ನು, ಪೃಥ್ವಿ ಕೋಣನೂರು ಅವರು ರೈಲ್ವೇ ಚಿಲ್ಡ್ರನ್” ಹಾಗೂ “ಪಿಂಕಿ ಎಲ್ಲಿ ” ಚಿತ್ರಗಳನ್ನು…

ರಂಗಾಯಣ ರಘು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಜನಪದ ಸೊಗಡಿನ ಈ ಚಿತ್ರ ಜನವರಿ 12ರಂದು ತೆರೆಗೆ .

ರಂಗಾಯಣ ರಘು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಜನಪದ ಸೊಗಡಿನ ಈ ಚಿತ್ರ ಜನವರಿ 12ರಂದು ತೆರೆಗೆ .

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ರಂಗ ಸಮುದ್ರ” ಚಿತ್ರದ ಟ್ರೇಲರ್ ಅನ್ನು ರಾಘವೇಂದ್ರ ರಾಜಕುಮಾರ್ ಅವರು ಬಿಡುಗಡೆ ಮಾಡಿ ಶುಭ ಕೋರಿದರು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ರಾಘವೇಂದ್ರ ರಾಜಕುಮಾರ್, ಇಂತಹ ಕಥಾವಸ್ತು ಆಯ್ಕೆ ಮಾಡಿಕೊಂಡಿರುವ ನಿರ್ದೇಶಕರಿಗೆ ಮೊದಲ ಸೆಲ್ಯೂಟ್. ಇನ್ನು ರಂಗಾಯಣ ರಘು ಅವರ ಅಭಿನಯ ನಿಜಕ್ಕೂ ಅದ್ಭುತ. ಇಂತಹ ಚಿತ್ರದಲ್ಲಿ ನಾನು ಅಭಿನಯಿಸಿರುವುದು ನನ್ನ ಭಾಗ್ಯ. ಈ ಚಿತ್ರ ಯಶಸ್ವಿಯಾಗಲಿ….

ಜನವರಿ 3 ರಂದು “ಸಪ್ಲೆಯರ್ ಶಂಕರ” ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ .

ಜನವರಿ 3 ರಂದು “ಸಪ್ಲೆಯರ್ ಶಂಕರ” ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ & ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ “ಗಂಟು ಮೂಟೆ” , “ಟಾಮ್ & ಜರ್ರಿ” ಖ್ಯಾತಿಯ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೆಯರ್ ಶಂಕರ” ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿದೆ. ಜನವರಿ 3 ರಂದು ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಆಗಲಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಚಿತ್ರದ ಕುರಿತಾದ ಮಹತ್ವದ ಸುದ್ದಿಯನ್ನು ತಿಳಿಸಲು ಚಿತ್ರತಂಡ ತಯಾರಿ ನಡೆಸಿದೆ. ಚಿತ್ರತಂಡದಿಂದ ಹೊರಬರುತ್ತಿರುವ ಮಹತ್ವದ…

ನ್ಯೂ ಇಯರ್ ಗೆ ಬಂತು “ಮ್ಯಾಟ್ನಿ” ಚಿತ್ರದ ಮಾಸ್ ಹಾಡು . ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ .

ನ್ಯೂ ಇಯರ್ ಗೆ ಬಂತು “ಮ್ಯಾಟ್ನಿ” ಚಿತ್ರದ ಮಾಸ್ ಹಾಡು . ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ .

ನೀನಾಸಂ ಸತೀಶ್ ಹಾಗೂ ರಚಿತಾರಾಮ್ “ಅಯೋಗ್ಯ” ಚಿತ್ರದ ನಂತರ ನಟಿಸಿರುವ ಚಿತ್ರ “ಮ್ಯಾಟ್ನಿ”. ಬಹು ನಿರೀಕ್ಷಿತ ಈ ಚಿತ್ರದ ” ಬಾರೋ ಬಾರೋ ಬಾಟಲ್ ತಾರೋ” ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ಹಾಗೂ…