satya prakash

  • “X&Y” ಚಿತ್ರದ “ಆoಬು ಆಟೋ ” ಎಂಬ ಆಪ್ತಮಿತ್ರ.

    ಇನ್ನೇನು ಬಿಡುಗಡೆಯ ಅoಚಿಗೆ ಬoದಿರುವ ಕನ್ನಡದ “X&Y” ಚಿತ್ರದಲ್ಲಿ  ಆಟೋರಿಕ್ಷಾ “ಆಂಬು ಆಟೋ ” ಆಗಿ ಬಡ್ತಿ ಪಡೆದು ಎಲ್ಲರ ಗಮನ ಸೆಳೆದಿದೆ.  ಆಂಬುಲೆನ್ಸ್ ನಲ್ಲಿರುವoತೆ ಎಲ್ಲ ಸೌಲಭ್ಯಗಳನ್ನು ಈ ಆಟೋದಲ್ಲಿ ಅಳವಡಿಸಿ ಚಿತ್ರದಲ್ಲಿ ಅದನ್ನೊಂದು ಕಲಾವಿದನೆoಬಂತೆ ಕಲಾತ್ಮಕವಾಗಿ ಬಳಸಲಾಗಿದೆ. ಈ ವಿಷಯ ತಿಳಿದ ಆಟೋ ಚಾಲಕರು ಗುಂಪು-ಗುಂಪಾಗಿ, ಚಿತ್ರ ನಿರ್ದೇಶಕ ಸತ್ಯಪ್ರಕಾಶ್ ಅವರನ್ನು ಖುದ್ದು ಭೇಟಿ ಮಾಡಿ, ‘ಸರ್ ಇಲ್ಲಿತನಕ ‘ಆಟೋರಿಕ್ಷಾ’ ನಮ್ಮ ‘ಮಿತ್ರ’ನಾಗಿತ್ತು. ಈಗದನ್ನು ‘ಆಂಬು ಆಟೋ’ ಆಗಿ ಪರಿವರ್ತಿಸಿ ಎಲ್ಲರ ‘ಆಪ್ತಮಿತ್ರ’ನಾಗಿರುವಂತೆ ಮಾಡಿದ್ದೀರಿ…

  • “ಆದಿಪರ್ವ”ದ ಮೂಲಕ ಖ್ಯಾತ ನಟ ಮೋಹನ್ ಬಾಬು ಪುತ್ರಿ ಮಂಚು ಲಕ್ಷ್ಮೀ ಕನ್ನಡಕ್ಕೆ .

    ತೆಲುಗಿನ ಸೂಪರ್ ಸ್ಟಾರ್ ಮೋಹನ್ ಬಾಬು ಅವರ ಮಗಳು ಮಂಚು ಲಕ್ಷ್ಮೀ “ಆದಿಪರ್ವ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿರುವ “ಆದಿಪರ್ವ” ಚಿತ್ರವನ್ನು, ಸಂಜೀವ್ ಕುಮಾರ್ ಮೆಗೋಟಿ ನಿರ್ದೇಶಿಸಿದ್ದಾರೆ. ರವಿ ಕಿರಣ್ ನಿರ್ದೇಶನದ “ಬದುಕು” ಚಿತ್ರಕ್ಕೆ ಚಿತ್ರಕಥೆ – ಸಂಭಾಷಣೆ ಬರೆಯುವ ಮೂಲಕ ಕನ್ನಡಿಗರಿಗೆ ಪರಿಚಯರಾದ ಸಂಜೀವ್ ಕುಮಾರ್ ಮೆಗೋಟಿ, ಪೂಜಾ ಗಾಂಧಿ ಅಭಿನಯದ “ಆಪ್ತ”, “ದಂಡು”, “ಕ್ಯೂ”, ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಕಳೆದ 8 ವರ್ಷಗಳಲ್ಲಿ ತೆಲುಗು…

  • “ದ ಜಡ್ಜ್ ಮೆಂಟ್” ಬಗ್ಗೆ ತಂತ್ರಜ್ಞರ ಮಾತು .

    G9 communication media & entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರದ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಈ ಪತ್ರಿಕಾಗೋಷ್ಠಿಯಲ್ಲಿ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸಂಕಲನ ಕಾರ್ಯ ನಡೆಯುತ್ತಿದೆ. ನಮ್ಮ…

  • ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ತೆರೆಗೆ .

    ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ನಾನು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಟಿಸಿರುವ ಮೂರನೇ ಚಿತ್ರವಿದು. ವಿಶೇಷವೆಂದರೆ ನಾನು ಈ ಚಿತ್ರದಲ್ಲಿ ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಈವರೆಗೂ ಮಾಡಿರದ ಪಾತ್ರವೆನ್ನಬಹುದು. ಶ್ರೀನಿ ನಿರ್ದೇಶನ, ಮಹೇಂದ್ರ ಸಿಂಹ ಅವರ…