“೪೦ ವರ್ಷದ ಆಳ್ವಿಕೆ,ಕಿರೀಟ ಎಂದಿಗೂ ಇಳಿಯಲ್ಲ .”ಕರುನಾಡ ಚಕ್ರವರ್ತಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.!𝗛𝗮𝗽𝗽𝘆 𝗕𝗶𝗿𝘁𝗵𝗱𝗮𝘆 𝗠𝟭𝟲 𝗝𝗝 𝗥𝗢𝗬
“Forty Years of Reign,The Crown Never Comes Off.”Heartfelt Birthday Wishes to the Emperor of Karnataka!
“Forty Years of Reign,The Crown Never Comes Off.”Heartfelt Birthday Wishes to the Emperor of Karnataka!
ಶಿವ ರಾಜಕುಮಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ; ದುನಿಯಾ ವಿಜಯ್ ಅತ್ಯುತ್ತಮ ನಿರ್ದೇಶಕ, ಗಣೇಶ್ ಅತ್ಯುತ್ತಮ ನಟ ಬೆಂಗಳೂರು ಮೇ 11: ಕನ್ನಡದ ಸೂಪರ್ಸ್ಟಾರ್ ಶಿವ ರಾಜಕುಮಾರ್ ಅವರಿಗೆ ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025 ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರಿಗೆ ಟ್ರೋಫಿ, ಹಂಸಲೇಖ ಅವರ ಐದನಿ ಸಂಸ್ಥೆಯಿಂದ ಚಿನ್ನದ ಪದಕ ಮತ್ತು ಸನ್ಮಾನ ಪತ್ರವನ್ನು ನೀಡಲಾಯಿತು. ಪ್ರಶಸ್ತಿಗಳ ಆರನೇ ಆವೃತ್ತಿಯಲ್ಲಿ…
ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ “#MB” ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD – ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯಕಾಂತ್ ಅಭಿನಯದ ಸೂಪರ್ ಹಿಟ್ “ವಲ್ಲರಸು” ಚಿತ್ರದ ನಿರ್ದೇಶಕ ಎನ್ ಮಹಾರಾಜನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈವರೆಗೂ ಮೂರು ತಮಿಳು ಹಾಗೂ ಸನ್ನಿ ಡಿಯೋಲ್ ಅಭಿನಯದ ಹಿಂದಿ…
ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರದ ಚಿತ್ರೀಕರಣ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಬಿರುಸಿನಿಂದ ಸಾಗಿದೆ. ಚಿತ್ರೀಕರಣ ಸ್ಥಳಕ್ಕೆ ಆನಂದಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ಭೇಟಿ ನೀಡಿ ಚಿತ್ರತಂಡದವರನ್ನು ಆಶೀರ್ವದಿಸಿ,…
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು. ನಾನು ನಟ ಆಗಬೇಕೆಂದುಕೊಂಡವನಲ್ಲ….
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ…
ಎಸ್ ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ, ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸಿರುವ, ತಮಿಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿರುವ “ಇಮೇಲ್” ಚಿತ್ರದ ಕನ್ನಡ ಅವತರಣಿಕೆಯ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. “ಇಮೇಲ್” ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ. ಎಸ್ ಆರ್ ರಾಜನ್ ಅವರು “ಇಮೇಲ್” ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ….
ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ ಎಂದು ಮಾತನಾಡಿದ ಶಿವರಾಜಕುಮಾರ್, ಚಿಕ್ಕಣ್ಣ ನನ್ನ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ನಾಯಕನಾಗುತ್ತಿದ್ದಾರೆ. ಹಾಡುಗಳನ್ನು ನೋಡಿದ್ದೇನೆ. ಚಿಕ್ಕಣ್ಣ ನಿಜಕ್ಕೂ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ. ಉಮಾಪತಿ ಅವರು…
ಮೋಹನ್ ಬಾಬು, ಮೋಹನ್ ಲಾಲ್, ಶಿವರಾಜಕುಮಾರ್, ಪ್ರಭಾಸ್ ಮುಂತಾದ ಈ ದೇಶದ ಪ್ರತಿಭಾವಂತ ಕಲಾವಿದರ ನಡುವೆ ‘ಕಣ್ಣಪ್ಪ’ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವವರು ಟಾಲಿವುಡ್ ನಟ ವಿಷ್ಣು ಮಂಚು. ಇಂದು ತಮ್ಮ ಹುಟ್ಟುಹಬ್ಬವನ್ನು ವಿಷ್ಣು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರತಂಡವು ಅವರ ಮೊದಲ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ಇನ್ನಷ್ಟು ಅದ್ದೂರಿಯಾಗಿಸುವುದರ ಜೊತೆಗೆ ನೆನಪಿನಲ್ಲುಳಿಯುವಂತೆ ಮಾಡಿದೆ.ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ‘ಕಣ್ಣಪ್ಪ’ ಚಿತ್ರದ ಶೇ.80ರಷ್ಟು ಚಿತ್ರೀಕರಣ ನ್ಯೂಜಿಲ್ಯಾಂಡ್ನ ರಮಣೀಯ ಪ್ರದೇಶಗಳಲ್ಲಿ ನಡೆದಿದ್ದು, ಹಾಲಿವುಡ್ ಛಾಯಾಗ್ರಾಹಕ ಶೆಲ್ಡನ್…
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡುತ್ತಿರುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ, ರೋಹಿತ್ ಪದಕಿ ನಿರ್ದೇಶನದ ಹಾಗೂ ಡಾಲಿ ಧನಂಜಯ – ಸ್ಯಾಂಡಲ್ ವುಡ್ ಕ್ವೀನ್ ರಮ್ಯ ನಾಯಕ – ನಾಯಕಿಯಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ” ಉತ್ತರಕಾಂಡ” ಚಿತ್ರದ ಪ್ರಮುಖಪಾತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ.