“ದ ಜಡ್ಜ್ ಮೆಂಟ್” ಬಗ್ಗೆ ತಂತ್ರಜ್ಞರ ಮಾತು .

G9 communication media & entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರದ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಈ ಪತ್ರಿಕಾಗೋಷ್ಠಿಯಲ್ಲಿ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು.

ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸಂಕಲನ ಕಾರ್ಯ ನಡೆಯುತ್ತಿದೆ. ನಮ್ಮ ಚಿತ್ರದ ತಂತ್ರಜ್ಞರನ್ನು ಪರಿಚಯಿಸುವ ಸಲುವಾಗಿ ಈ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ. ನಾನು ಹಿಂದೆ ನಿರ್ಮಾಪಕನಾಗಿ ಬಂದಾಗ ಯಾರು ಕೂಡ ನನ್ನನ್ನು ಪರಿಚಯಿಸಿರಲಿಲ್ಲ. ಆಗ ನನಗೆ ತುಂಬಾ ಬೇಸರವಾಗಿತ್ತು. ನಿರ್ಮಾಪಕರಿಗೆ ಸಲುವ ಗೌರವ ಸಲ್ಲಲ್ಲೇ ಬೇಕು. ಹಾಗಾಗಿ ನಾನು ಮೊದಲು ನಿರ್ಮಾಪಕರನ್ನು ಪರಿಚಯಿಸುತ್ತಿದ್ದೇನೆ. ಶರದ್ ನಾಡಗೌಡ, ವಿಶ್ವನಾಥ್ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಹಾಡನ್ನು ಬರೆದಿದ್ದಾರೆ. ವಾಸುದೇವ ಚಿತ್ರಕಥೆ, ಎಂ.ಎಸ್ ರಮೇಶ್ ಸಂಭಾಷಣೆ, ಕೆಂಪರಾಜ್ ಸಂಕಲನ ಹಾಗೂ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಈ ಚಿತ್ರಕ್ಕಿದೆ ಎಂದರು.

ನಾವು ಗೆಳೆಯರೆಲ್ಲಾ ಸೇರಿಕೊಂಡು ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ ಚಿತ್ರೀಕರಣ ಪೂರ್ಣವಾಗಿ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.
ನಮ್ಮ ಚಿತ್ರ ಈಗಾಗಲೇ ಮುಂಬೈ ತನಕ ತಲುಪಿದೆ. ಚಿತ್ರವನ್ನು ಹಿಂದಿಯಲ್ಲಿ ರಿಮೇಕ್ ಮಾಡುವ ಯೋಜನೆಯಿದೆ. ಅಲ್ಲಿನ ಪ್ರಸಿದ್ದ ನಟರೊಬ್ಬರ ಜೊತೆ ಸದ್ಯದಲ್ಲೇ ಈ ಕುರಿತು ಚರ್ಚಿಸಲಿದ್ದೇವೆ.‌ ನಮ್ಮ ಚಿತ್ರ ಅಲ್ಲಿಯವರೆಗೂ ತಲುಪಲು ಇಲ್ಲಿನ ಮಾಧ್ಯಮ ನೀಡಿದ ಬೆಂಬಲ ಕಾರಣ ಎಂದರು ನಿರ್ಮಾಪಕರಾದ ಶರದ್ ನಾಡಗೌಡ ಹಾಗೂ ರಾಮು ರಾಯಚೂರು.

ಈಗ ಸಾಮಾನ್ಯವಾಗಿ ಮೊಬೈಲ್ ನಲ್ಲೇ ಟ್ಯೂನ್ ಕಳುಹಿಸುತ್ತಾರೆ. ನಾವು ಸಾಹಿತ್ಯ ಬರೆದು ಕಳುಹಿಸುತ್ತೇವೆ. ಆದರೆ ಈ ಚಿತ್ರದಲ್ಲಿ ಅನೂಪ್ ಸೀಳಿನ್ ಅವರ ಉಪಸ್ಥಿತಿಯಲ್ಲೇ ಹಾಡು ಬರೆದಿದ್ದೇನೆ. ನಿರ್ದೇಶಕರಿಗೂ ಇಷ್ಟವಾಗಿದೆ ಎಂದರು ಗೀತರಚನೆಕಾರ ಪ್ರಮೋದ್ ಮರವಂತೆ.

ನನ್ನ ಮೂವತ್ತೆರಡು ವರ್ಷಗಳ ಸಿನಿ ಜರ್ನಿಯಲ್ಲಿ ತಂತ್ರಜ್ಞರಿಗಾಗಿ ಪತ್ರಿಕಾಗೋಷ್ಠಿ ಆಯೋಜಿಸಿರುವುದು ಇದೇ ಮೊದಲಿರಬೇಕು. ಈ ಚಿತ್ರದ ಸಂಭಾಷಣೆ ಮಾಮೂಲಿ ತರಹ ಇಲ್ಲ. ಸ್ವಲ್ಪ ಭಿನ್ನವಾಗಿದೆ ಎಂದರು ಸಂಭಾಷಣೆ ಬರೆದಿರುವ ಎಂ ಎಸ್ ರಮೇಶ್.

ಈಗ ಸಾಮಾನ್ಯವಾಗಿ ಕಥೆಯನ್ನು ಯಾರೊಂದಿಗೂ ಜಾಸ್ತಿ ಚರ್ಚೆ ಮಾಡುವುದಿಲ್ಲ. ಆದರೆ ಈ ಚಿತ್ರದ ಕಥೆಯನ್ನು ನಿರ್ದೇಶಕರು ಸತ್ಯಪ್ರಕಾಶ್, ಗೋಪಿ ಪೀಣ್ಯ ಮುಂತಾದವರ ಜೊತೆ ಚರ್ಚಿಸಿದ್ದರು. ಹಾಗೆ ಮಾಡಿದಾಗ ಒಂದೊಳ್ಳೆ ಕಥೆ ಹುಟ್ಟುತ್ತದೆ ಎಂದರು ಸಂಕಲನಕಾರ ಕೆಂಪರಾಜು.

ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಸಹ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಬಗ್ಗೆ ಸಂತಸ ವ್ಯಕ್ತಪಡಿಸಿ, ಚಿತ್ರೀಕರಣದ ಸನುಭವವನ್ನು ಹಂಚಿಕೊಂಡರು.

ಕ್ರೇಜಿಸ್ಟಾರ್ ರವಿಚಂದ್ರನ್, ನಾಗಾಭರಣ, ದಿಗಂತ್ , ಧನ್ಯ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Similar Posts

  • ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಭ್ ಶೆಟ್ಟಿ ಮತದಾನ.

    ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಕುಂದಾಪುರ ಜಿಲ್ಲೆಯ ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು . Whatsapp Kooapp Facebook Messenger Twitter Copy

  • ಹೊಂಬಾಳೆ ಫಿಲಂಸ್ ನ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ “ಯುವ”

    ಮೊದಲ ಚಿತ್ರದಲ್ಲೇ ಅಭಿಮಾನಿಗಳ ಮನಗೆದ್ದ ಯುವ ರಾಜಕುಮಾರ್ “ರಾಜಕುಮಾರ”, “ಕೆ.ಜಿ.ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ ಹಾಗೂ ಸಂತೋಷ್ ಆನಂದರಾಮ್ ನಿರ್ದೇಶನದ “ಯುವ” ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗಿದ್ದಿದೆ. ಹೊಂಬಾಳೆ ಫಿಲಂಸ್ ನ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ “ಯುವ” ಚಿತ್ರ. ದೊಡ್ಮನೆಯ ಕುಡಿ ಯುವ ರಾಜಕುಮಾರ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಮೊದಲ ಚಿತ್ರವಾಗಿರುವುದರಿಂದ ಸಾಕಷ್ಟು ನಿರೀಕ್ಷೆಗಳಿತ್ತು. ಆ ನಿರೀಕ್ಷೆಗಳಂತೆಯೇ ಚಿತ್ರ ಚೆನ್ನಾಗಿ…

  • ‘ಗರಡಿ’ಯಿಂದ ಬಂತು ಮೂರನೇ ಹಾಡು.

    ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು. ಎರಡನೇ ಲಾಕ್‌ಡೌನ್ ಸಮಯದಲ್ಲೇ ಈ…

  • ದುಬೈ ನಲ್ಲಿ “ಜಸ್ಟ್ ಪಾಸ್”.

    ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ “ದುಬೈ ದಸರಾ” ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ “ಜಸ್ಟ್ ಪಾಸ್” ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್‌ 13‌ ರಂದು ಈ ಚಿತ್ರದ ಟೀಸರ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ. ಶ್ರೀ, ಪ್ರಣತಿ, ರಂಗಾಯಣರಘು…

  • “X&Y” ಚಿತ್ರದ “ಆಂಬು ಆಟೋ ” ಗೆ ಫಿದಾ ಆದ ಆಟೋ ಚಾಲಕರು

    ರೀಲ್ಸ್ ಮೂಲಕ ಜನರಿಗೆ ಜಾಗೃತಿ . ಇನ್ನೇನು ಬಿಡುಗಡೆಯ ಹೊಸ್ತಿಲಲ್ಲಿರುವ ಕನ್ನಡದ ಬಹು ನಿರೀಕ್ಷಿತ “X&Y” ಚಿತ್ರತಂಡ ಇತ್ತೀಚೆಗೆ ಆಟೋರಿಕ್ಷಾ “ಆಂಬು ಆಟೋ” ಎಂಬ ವಾಹನದ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಚಿತ್ರದಲ್ಲಿ ಕಲಾವಿದನಂತೆ ಸಹ ನಿರ್ದೇಶಕ ಡಿ.ಸತ್ಯಪ್ರಕಾಶ್ ಬಳಸಿಕೊಂಡಿದ್ದಾರೆ. ಈಗಾಗಲೇ ಎಲ್ಲರ ಗಮನ ಸೆಳೆದಿರುವ “ಆಂಬು ಆಟೋ”ದಲ್ಲಿ ಆಂಬುಲೆನ್ಸ್ ನಲ್ಲಿರುವoತೆ ಎಲ್ಲ ಸೌಲಭ್ಯಗಳಿದೆ. ಆಟೋದಲ್ಲೂ ಇಷ್ಟು ಸೌಲಭ್ಯಗಳನ್ನು ಅಳವಡಿಸಬಹುದು ಎಂಬುದನ್ನು ” ರಾಮಾ ರಾಮಾ ರೆ” ಖ್ಯಾತಿಯ ನಿರ್ದೇಶಕ ಸತ್ಯಪ್ರಕಾಶ್ ತೋರಿಸಿಕೊಟ್ಟಿದ್ದಾರೆ.“ಆಂಬು ಆಟೋ” ಗೆ ಆಟೋ ಚಾಲಕರು…

  • ‘ದೈಜಿ’ ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರ.

    ‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಈ ಚಿತ್ರವು ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರವಾಗಿದ್ದು, ಈ ಹಿಂದೆ ಶಿವಾಜಿ ಸುರತ್ಕಲ್ 1 ಮತ್ತು 2  ಸಿನಿಮಾಗಳನ್ನು ನಿರ್ದೇಶಸಿದ್ದ ನಿರ್ದೇಶಕ ಆಕಾಶ್ ಶ್ರೀವತ್ಸರವರು ಮೂರನೇ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ. ದೈಜಿಯು ಹಾರರ್-ಸೈಕಲಾಜಿಕಲ್ ಥ್ರಿಲ್ಲರ್…

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments